ಹವಾಮಾನ

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಕಡುಚಳಿ ಮುಂದುವರಿಕೆ, ಬಾಗಲಕೋಟೆಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇನ್ನೆರಡು ದಿನ ಶೀತದ ಅಲೆ – 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಡಿಸೆಂಬರ್ 15: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14 ರಿಂದ 15 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಿದ್ದು, ಹೆಚ್‌ಎಎಲ್ ಪ್ರದೇಶದಲ್ಲಿ 13 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಕುಸಿದಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದ ಅಲೆಗಳು ಬೀಸುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇದಲ್ಲದೆ ಗದಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ತೀವ್ರ ಚಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಮತೋಲನ ಆಹಾರ ಸೇವಿಸುವುದರ ಜೊತೆಗೆ ಬೆಚ್ಚನೆಯ ಉಡುಪು ಧರಿಸುವಂತೆ ಹವಾಮಾನ ಇಲಾಖೆ ಮತ್ತು ವೈದ್ಯರು ಸಲಹೆ ನೀಡಿದ್ದಾರೆ.

ಲಾಲ್‌ಬಾಗ್‌ನಲ್ಲಿ ವಾಕಿಂಗ್‌ಗೆ ಜನರ ಕೊರತೆ

ಬೆಂಗಳೂರಿನಲ್ಲಿ ಚಳಿ ತೀವ್ರಗೊಂಡ ಪರಿಣಾಮ ಬೆಳಗಿನ ವಾಯುವಿಹಾರಕ್ಕೆ ಜನರು ಹಿಂದೇಟು ಹಾಕುತ್ತಿದ್ದಾರೆ. ಲಾಲ್‌ಬಾಗ್ ಸೇರಿದಂತೆ ಪ್ರಮುಖ ಉದ್ಯಾನವನಗಳಲ್ಲಿ ವಾಕಿಂಗ್‌ಗೆ ಬರುವವರ ಸಂಖ್ಯೆ ಶೇ.50ರಷ್ಟು ಕಡಿಮೆಯಾಗಿದೆ. ಡಿಸೆಂಬರ್ 17ರಿಂದ ಚಳಿ ಪ್ರಮಾಣ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವೈದ್ಯರು ಮಕ್ಕಳ ಹಾಗೂ ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದು, ಬೆಳಗಿನ ವ್ಯಾಯಾಮವನ್ನು ತಾತ್ಕಾಲಿಕವಾಗಿ ತಪ್ಪಿಸಿ, ಬಿಸಿ ಆಹಾರ ಸೇವನೆ ಹಾಗೂ ಬೆಚ್ಚನೆಯ ಬಟ್ಟೆ ಧರಿಸುವಂತೆ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ನಿನ್ನೆ ದಾಖಲಾಗಿದ ಕನಿಷ್ಠ ಉಷ್ಣಾಂಶ

ನಿನ್ನೆ ರಾಜ್ಯದಲ್ಲಿ ದಾಖಲಾಗಿದ ಕನಿಷ್ಠ ತಾಪಮಾನಗಳಲ್ಲಿ ಬಿದರ್‌ನಲ್ಲಿ 7.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನವಾಗಿದೆ. ಹೊನ್ನಾವರದಲ್ಲಿ 19.13 ಡಿಗ್ರಿ, ಬೆಂಗಳೂರು ಎಚ್‌ಎಎಲ್ ಪ್ರದೇಶದಲ್ಲಿ 13.4 ಡಿಗ್ರಿ, ಬೆಂಗಳೂರು ನಗರದಲ್ಲಿ 14.5 ಡಿಗ್ರಿ, ಬೆಂಗಳೂರು KIAL ಪ್ರದೇಶದಲ್ಲಿ 12.9 ಡಿಗ್ರಿ, ಹಾಸನದಲ್ಲಿ 8.7 ಡಿಗ್ರಿ, ಆಗುಂಬೆಯಲ್ಲಿ 9.3 ಡಿಗ್ರಿ, ಧಾರವಾಡದಲ್ಲಿ 9.5 ಡಿಗ್ರಿ ಹಾಗೂ ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಚಳಿಗಾಲ ಮತ್ತು ಹೃದಯಾಘಾತದ ಅಪಾಯ

ಮುಂದಿನ ನಾಲ್ಕು ದಿನಗಳ ಕಾಲ ಬೆಳಗ್ಗೆ 3ರಿಂದ 8 ಗಂಟೆಯವರೆಗೆ ಹೆಚ್ಚಿನ ಚಳಿ ಇರಲಿದ್ದು, ಸಿಲಿಕಾನ್ ಸಿಟಿಯಲ್ಲಿ ತೀವ್ರ ಶೀತ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ತಜ್ಞರ ಪ್ರಕಾರ ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಶೇ.10 ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಜಯದೇವ ಆಸ್ಪತ್ರೆಯ ವೈದ್ಯರು ಬೆಳಗಿನ ವಾಕ್ ಬದಲು ಸಂಜೆಯ ವಾಕಿಂಗ್ ಉತ್ತಮ ಎಂದು ಸಲಹೆ ನೀಡಿದ್ದು, ಬಜ್ಜಿ, ಬೋಂಡಾ ಮುಂತಾದ ಕರಿದ ಆಹಾರ ಸೇವನೆ ತಪ್ಪಿಸಿ ಆರೋಗ್ಯಕರ ಜೀವನಶೈಲಿ ಅನುಸರಿಸುವಂತೆ ಸೂಚಿಸಿದ್ದಾರೆ.

ಎಲ್ಲೆಲ್ಲಿ ಒಣಹವೆಯ ವಾತಾವರಣ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ಸ್ಥಿತಿ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಇದ್ದು, ಇಂದೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related posts

ಹವಾಮಾನ ಇಲಾಖೆಯಿಂದ ಬಿಗ್ ವಾರ್ನಿಂಗ್! ಈ ಬಾರಿ ವಾಡಿಕೆಗಿಂತ ಮುಂಚಿತವಾಗಿ ಹೆಚ್ಚುವರಿ ಚಳಿ – ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿತ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರಿದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

digitalbharathi24@gmail.com

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವಾಮಾನ; ಬೆಂಗಳೂರಿನಲ್ಲಿ ಚಳಿಯ ಎಚ್ಚರಿಕೆ

digitalbharathi24@gmail.com
Latest news
ಬೆಳಗಾವಿ ಚಳಿಗಾಲದ ಅಧಿವೇಶನ: 10 ದಿನಗಳಲ್ಲಿ 23 ವಿಧೇಯಕಗಳಿಗೆ ಅಂಗೀಕಾರ ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ತೀವ್ರ ಆಕ್ರೋಶ ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಶುಭ್‌ಮನ್ ಗಿಲ್ ಹೊರಗೆ, ಇಶಾನ್ ಕಿಶಾನ್‌ಗೆ ಕಂಬ್ಯಾಕ್ ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರಿದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ... ಬೇಡಿಕೆ ಈಡೇರಿದೆ, ನನ್ನ–ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಬೆಂಬಲದಿಂದಲೇ ಅವರು ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ... ಬೇರೆ ಧರ್ಮದವನನ್ನು ಮದುವೆಯಾದರೆ ಮಗಳಿಗೆ ತಂದೆಯ ಆಸ್ತಿಯಲ್ಲಿ ಹಕ್ಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಬೆಳಗಾವಿ ಚಳಿಗಾಲ ಅಧಿವೇಶನ: ಉತ್ತರ–ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರದ ನೆರವು ಕೋರಿ ನಿರ್ಣಯಗಳಿಗೆ ವಿಧಾನಸಭೆಯ ಸರ... ಮೋದಿ ಓಮನ್ ಭೇಟಿ… ಪಾಕ್–ಚೀನಾ ಏಕೆ ಪತರಗುಟ್ಟಿವೆ? ಹಿಜಾಬ್ ವಿಚಾರ ತೀವ್ರಗೊಂಡ ಬೆನ್ನಲ್ಲೇ ಸಿಎಂ ನಿತೀಶ್ ಕುಮಾರ್ ವಿರುದ್ಧ ದೂರು: ಬೆದರಿಕೆ ಎಚ್ಚರಿಕೆಯಿಂದ ಭದ್ರತೆ ಮತ್ತಷ್... ‘ಕೈ’ ಕಮಾಂಡ್‌ ತೃಪ್ತಿಗೆ ರಾಜ್ಯದ ಖಜಾನೆ ಖಾಲಿ ಮಾಡುತ್ತಿದ್ದಾರೆ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ...