ರಾಜ್ಯ

ಪರಪ್ಪನ ಅಗ್ರಹಾರದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಗೆ ಆದೇಶ: ನಟ ದರ್ಶನ್ ಜೊತೆ ಮುಖಾಮುಖಿ, ಜೈಲು ವ್ಯವಸ್ಥೆಗೆ DGP ಅಲೋಕ್ ಕುಮಾರ್ ಶಿಸ್ತು ಸಂದೇಶ

ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಮೊದಲ ಬಾರಿಗೆ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಸಮಗ್ರ ಹಾಗೂ ಕಠಿಣ ಪರಿಶೀಲನೆ ನಡೆಸಿದರು. ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿದೆ ಎನ್ನಲಾದ ವಿಶೇಷ ಸೌಲಭ್ಯಗಳು ಹಾಗೂ ಶಿಸ್ತುಭಂಗದ ಆರೋಪಗಳು ಸುದ್ದಿಯಾಗಿರುವ ಹಿನ್ನೆಲೆ ಈ ಭೇಟಿ ಮಹತ್ವ ಪಡೆದಿದೆ.

ಪರಿಶೀಲನೆ ವೇಳೆ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಡಿಜಿಪಿ ಅಲೋಕ್ ಕುಮಾರ್ ಭೇಟಿಯಾಗಿ ಪ್ರಕರಣದ ಸ್ಥಿತಿ, ನ್ಯಾಯಾಲಯದ ವಿಚಾರಣೆ ಮತ್ತು ಜೈಲಿನ ಪರಿಸ್ಥಿತಿಗಳ ಕುರಿತು ಮಾಹಿತಿ ಪಡೆದರು. ದರ್ಶನ್ ಯಾವುದೇ ವಿಶೇಷ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ತಿಳಿಸಿದ ಅವರು, ದರ್ಶನ್ ಸೇರಿದಂತೆ ಆರು ಮಂದಿ ಕೈದಿಗಳು ಒಂದೇ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಗಳಂತೆ ವಾಸವಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಜೈಲಿನ ಹೊರಾಂಗಣ ಪ್ರದೇಶ, ಚೆಕ್‌ಪೋಸ್ಟ್‌ಗಳು, ಪ್ರತಿಯೊಂದು ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ ಹಾಗೂ ಬೇಕರಿ ವಿಭಾಗಗಳವರೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಜಿಪಿ, ಕೈದಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದರು. ಆಹಾರ ವ್ಯವಸ್ಥೆ, ಸ್ವಚ್ಛತೆ, ಆರೋಗ್ಯ ಸೇವೆ ಹಾಗೂ ಭದ್ರತೆ ಕುರಿತು ಮಾಹಿತಿ ಪಡೆದ ಅವರು, ಯಾವುದೇ ರೀತಿಯ ರಾಜಾತಿಥ್ಯ, ಅಕ್ರಮ ಸೌಲಭ್ಯಗಳು ಅಥವಾ ಶಿಸ್ತುಭಂಗ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮೊಬೈಲ್ ಫೋನ್, ಗಾಂಜಾ, ಬೀಡಿ–ಸಿಗರೇಟ್ ಸೇರಿದಂತೆ ನಿಷೇಧಿತ ವಸ್ತುಗಳಿಗೆ ಸಂಪೂರ್ಣ ನಿಷೇಧವಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅಲೋಕ್ ಕುಮಾರ್, ಇಂತಹ ವಸ್ತುಗಳ ಸಾಗಾಣಿಕೆ ಅಥವಾ ಬಳಕೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ವೈದ್ಯರು ಚಿಕಿತ್ಸೆ ನೀಡುವ ಮಟ್ಟಕ್ಕೆ ಮಾತ್ರ ಸೀಮಿತವಾಗಬೇಕು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು ಎಂದು ಅವರು ಸೂಚಿಸಿದರು.

ರಾಜ್ಯಾದ್ಯಂತ ಕಳೆದ 72 ಗಂಟೆಗಳಲ್ಲಿ ಜೈಲುಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ಕಾರವಾರ ಜೈಲುಗಳಲ್ಲಿ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದರು. ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾದ ಕೈದಿಗಳನ್ನು ಇತರ ಜೈಲುಗಳಿಗೆ ವರ್ಗಾಯಿಸಿರುವುದಾಗಿ ತಿಳಿಸಿದರು. ಜೈಲು ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಭದ್ರತೆ ಕಾಪಾಡಲು ಈ ಕ್ರಮಗಳನ್ನು ಮೊದಲ ಹಂತ ಎಂದು ವಿವರಿಸಿದ ಅವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳು ಜಾರಿಗೆ ಬರಲಿವೆ ಎಂದು ಹೇಳಿದರು.

ಪರಿಶೀಲನೆ ವೇಳೆ ಜೈಲು ಸುತ್ತಮುತ್ತಲಿನ ಪಾರ್ಕಿಂಗ್ ಅವ್ಯವಸ್ಥೆ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದ ಮೇಲೂ ಅಸಮಾಧಾನ ವ್ಯಕ್ತಪಡಿಸಿದ ಡಿಜಿಪಿ, ಲಭ್ಯವಿರುವ ಜಾಗವನ್ನು ಸಮರ್ಪಕವಾಗಿ ಬಳಸಿಕೊಂಡು ವ್ಯವಸ್ಥೆ ಸುಧಾರಿಸುವಂತೆ ಸೂಚಿಸಿದರು. ಯಾವುದೇ ಅಕ್ರಮ ಅಥವಾ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ ಎಂದು ಅವರು ಎಚ್ಚರಿಸಿದರು.

Related posts

ಹೈಕೋರ್ಟ್ ಸ್ಥಳಾಂತರ ಚರ್ಚೆ: ಕಬ್ಬನ್ ಪಾರ್ಕ್ ಹತ್ತಿರ ಹೊಸ ಸ್ಥಳ ಪರಿಗಣನೆ – ವಕೀಲರಿಂದ ರೇಸ್ ಕೋರ್ಸ್ ಜಾಗ ಸಲಹೆ, ಪರಿಶೀಲನೆಗೆ ಡಿಕೆ ಶಿವಕುಮಾರ್ ಭರವಸೆ

ಹವಾಮಾನ ಇಲಾಖೆಯಿಂದ ಬಿಗ್ ವಾರ್ನಿಂಗ್! ಈ ಬಾರಿ ವಾಡಿಕೆಗಿಂತ ಮುಂಚಿತವಾಗಿ ಹೆಚ್ಚುವರಿ ಚಳಿ – ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿತ

ಡಿಸೆಂಬರ್ 9ರಂದು BJP ಯಿಂದ ಸುವರ್ಣ ವಿಧಾನಸೌಧ ಮುತ್ತಿಗೆ: ಸರ್ಕಾರದ ವೈಫಲ್ಯಗಳ ವಿರುದ್ಧ ಭಾರೀ ಪ್ರತಿಭಟನೆಗೆ ಸಜ್ಜು

digitalbharathi24@gmail.com
Latest news
ಬೆಳಗಾವಿ ಚಳಿಗಾಲದ ಅಧಿವೇಶನ: 10 ದಿನಗಳಲ್ಲಿ 23 ವಿಧೇಯಕಗಳಿಗೆ ಅಂಗೀಕಾರ ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ತೀವ್ರ ಆಕ್ರೋಶ ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ; ಶುಭ್‌ಮನ್ ಗಿಲ್ ಹೊರಗೆ, ಇಶಾನ್ ಕಿಶಾನ್‌ಗೆ ಕಂಬ್ಯಾಕ್ ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರಿದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ... ಬೇಡಿಕೆ ಈಡೇರಿದೆ, ನನ್ನ–ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಬೆಂಬಲದಿಂದಲೇ ಅವರು ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ... ಬೇರೆ ಧರ್ಮದವನನ್ನು ಮದುವೆಯಾದರೆ ಮಗಳಿಗೆ ತಂದೆಯ ಆಸ್ತಿಯಲ್ಲಿ ಹಕ್ಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಬೆಳಗಾವಿ ಚಳಿಗಾಲ ಅಧಿವೇಶನ: ಉತ್ತರ–ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರದ ನೆರವು ಕೋರಿ ನಿರ್ಣಯಗಳಿಗೆ ವಿಧಾನಸಭೆಯ ಸರ... ಮೋದಿ ಓಮನ್ ಭೇಟಿ… ಪಾಕ್–ಚೀನಾ ಏಕೆ ಪತರಗುಟ್ಟಿವೆ? ಹಿಜಾಬ್ ವಿಚಾರ ತೀವ್ರಗೊಂಡ ಬೆನ್ನಲ್ಲೇ ಸಿಎಂ ನಿತೀಶ್ ಕುಮಾರ್ ವಿರುದ್ಧ ದೂರು: ಬೆದರಿಕೆ ಎಚ್ಚರಿಕೆಯಿಂದ ಭದ್ರತೆ ಮತ್ತಷ್... ‘ಕೈ’ ಕಮಾಂಡ್‌ ತೃಪ್ತಿಗೆ ರಾಜ್ಯದ ಖಜಾನೆ ಖಾಲಿ ಮಾಡುತ್ತಿದ್ದಾರೆ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ...